9:59 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಫೆಬ್ರವರಿ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಬೊಮ್ಮಾಯಿ

24/12/2022, 18:42

ಹಾವೇರಿ(reporterkarnataka.com): ಫೆಬ್ರುವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆಯಾಗಲಿದ್ದು, ಈ ಸಂಬಂಧ ಹಣಕಾಸು ಇಲಾಖೆಯ ಜತೆಗೆ ಎರಡು ಸುತ್ತಿನ ಚರ್ಚೆ ನಡೆಸಲಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ– ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಶಿಗ್ಗಾಂವಿಯಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಜನವರಿ ತಿಂಗಳಿನಿಂದ ಬಜೆಟ್ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದರು.

ಕೋವಿಡ್ ಗೆ ಕ್ರಮ: ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಕುರಿತು ಮಾಹಿತಿ ನೀಡಿದ ಅವರು,ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್,ಬೆಡ್ ಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋವಿಡ್ ನಿಂದ ತೊಡಕು ಉಂಟಾಗುವುದೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು