4:13 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು