1:03 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು