5:38 AM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು