7:30 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಫೀಡರ್ ಗಳಲ್ಲಿ ತುರ್ತು ದುರಸ್ತಿ ಕಾರ್ಯ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮುಂದಕ್ಕೆ ಓದಿ ನೋಡಿ

11/08/2021, 08:30

ಮಂಗಳೂರು(reporterkarnataka.com):- ಇದೇ ಆ. 12ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ 220/110/11ಕೆವಿ ಬಜಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪೆರ್ಮುದೆ, ಭಟ್ರಕೆರೆ, ಕಣಿಕಟ್ಟ, ಹುಣ್ಸೆಕಟ್ಟೆ, ತೆಂಕ ಎಕ್ಕಾರು, ಎಕ್ಕಾರು,  ಬಜಪೆ, ಕಿನ್ನಿಪದವು, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಕಳವಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದೆ.  
ನಂದಿಗುಡ್ಡ: ಆಗಸ್ಟ್ 12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33/11ಕೆವಿ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಗಳಾದೇವಿ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್.  ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
  ಆ ಪ್ರಯುಕ್ತ ಮಂಗಳಾನಗರ, ಸುಭಾಶ್ನಗರ, ಶಿವನಗರ, ಪಾಂಡೇಶ್ವರ, ಎಮ್ಮೆಕೆರೆ, ಹೊಯ್ಗೆಬಜಾರ್, ಗೂಡ್ಸ್ಶೆಡ್, ಮಂಕೀಸ್ಟ್ಯಾಂಡ್, ಮಂಗಳಾದೇವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. 
ನೆಹರೂ ಮೈದಾನ: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಪಾಂಡೇಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. 
ಆ ಪ್ರಯುಕ್ತ ಆಗಸ್ಟ್ 12ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಎ.ಬಿ.ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ರಸ್ತೆ, ಪಾಂಡೇಶ್ವರ ನ್ಯೂ ರಸ್ತೆ, ಅಮೃತ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು