8:30 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

06/10/2021, 17:53

ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ ( 19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ 

ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ

ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕ ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.

ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು