2:57 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

06/10/2021, 17:53

ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ ( 19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ 

ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ

ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕ ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.

ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು