8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

06/10/2021, 17:53

ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ನೀನಾ ಸತೀಶ್‌ ( 19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕದ್ರಿಯಲ್ಲಿರುವ ಕಾಲೇಜಿನ ಹಾಸ್ಟೇಲ್‌ನ ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಮೂಲದ ನೀನಾ ಅವರು ನಗರದ ಕೊಲಾಸೋ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರು. ನರ್ಸಿಂಗ್‌ ವಿದ್ಯಾಭ್ಯಾಸಕ್ಕಾಗಿ ಕಾಲೇಜಿಗೆ 75 ಸಾವಿರ ರೂಪಾಯಿ ಫೀಸ್‌ 

ಪಾವತಿಸಿದ್ದರು. ಉಳಿದ ಹಣವನ್ನು ಪಾವತಿ ಮಾಡುವಂತೆ ಕಾಲೇಜಿನ ಆಡಳಿತ ಮಂಡಳಿ ಕೇಳುತ್ತಿದೆ. ಹಣ ಪಾವತಿ ಮಾಡದಿದ್ದರೆ ಯೂನಿಫಾರ್ಮ ನೀಡುವುದಿಲ್ಲ ಎಂದು ಬೆದರಿಕೆಯೊಡ್ಡಿದೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನೀನಾ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

ಕೊಲಾಸೋ ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ನರ್ಸಿಂಗ್‌ಗೆ 1.25 ಲಕ್ಷ ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗಿತ್ತು. ನೀನಾ 75 ಸಾವಿರ ಪಾವತಿ ಮಾಡಿದ್ದರು. ತಾಯಿ ಕೂಲಿ ಕೆಲಸ ಮಾಡಿ ಮಗಳಿಗೆ

ವಿದ್ಯಾಭ್ಯಾಸ ಮಾಡಿಸುತ್ತಿರುವುದರಿಂದ ನೀನಾಗೆ ಉಳಿದ 50 ಸಾವಿರ ರೂ. ಶುಲ್ಕ ಸಕಾಲದಲ್ಲಿ ಪಾತಿಸಲು ಸಾಧ್ಯವಾಗಲಿಲ್ಲ. ಕೊರೊನಾದ ಕಷ್ಟ ಕಾಲದಲ್ಲಿಯೂ ಕಾಲೇಜು ಆಡಳಿತ ಮಂಡಳಿ ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಗೆ ಒತ್ತಡ ಹೇರಿದೆ.

ಫೀಸು ತುಂಬುವಂತೆ ಯಾವುದೇ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳಿಗೆ, ಪೋಷಕರಿಗೆ ಒತ್ತಡ ಹೇರಬಾರದು ಎಂದು ಜಿಲ್ಲಾಧಿಕಾರಿ ಈಗಾಗಲೇ ಆದೇಶ ಕೂಡ ಹೊರಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು