5:38 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಫೆಂಗಲ್ ಚಂಡಮಾರುತ ಎಫೆಕ್ಟ್: ಮಂಗಳೂರು ಸಹಿತ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ

02/12/2024, 17:56

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.
ಮಂಗಳೂರು ನಗರದಲ್ಲಿ ಸೋಮವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆಯ ಬಳಿಕ ಭಾರೀ ಮಳೆಯಾಗಲಾರಂಭಿಸಿದೆ. ಬಲವಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಗುಡುಗು ಸಹಿತ ಭಾರೀ ವರ್ಷಧಾರೆ ಸುರಿಯುತ್ತಿದೆ.
ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಭಾನುವಾರದಿಂದಲೇ ಬೆಂಗಳೂರಿನ ವಾತಾವರಣ ಬದಲಾಗಿದೆ. ಸಿಲಿಕಾನ್ ಸಿಟಿ ಸಂಪೂರ್ಣ ತಂಪು ತಂಪಾಗಿತ್ತು. ಇದೀಗ ಮಳೆಯಾಗಲಾರಂಭಿಸಿದೆ.
ಬೆಂಗಳೂರು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿಯೂ ಮಳೆಯಾಗುತ್ತಿದೆ. ಫೆಂಗಲ್ ಚಂಡಮಾರುತಕ್ಕೆ ತಮಿಳುನಾಡು ಕರಾವಳಿಯಲ್ಲಿ ಭೂಕುಸಿತ ಉಂಟಾಗಿದೆ.
ಭಾರೀ ಮಳೆಯ ಎಚ್ಚರಿಕೆಯ ಹೊರತಾಗಿಯೂ, ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು