7:32 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು