7:41 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು