7:46 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು