6:43 PM Thursday8 - January 2026
ಬ್ರೇಕಿಂಗ್ ನ್ಯೂಸ್
ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್!

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು