11:47 AM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು