12:52 AM Sunday3 - May 2026
ಬ್ರೇಕಿಂಗ್ ನ್ಯೂಸ್
ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು