7:16 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು