10:02 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು