10:13 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು

03/12/2024, 18:30

ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.
ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ಮಳೆ ಹಾಗೂ ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿ, ಕರ್ನಾಟಕ ಮತ್ತು ಕೇರಳ ಸಾಕಷ್ಟು ಅನಾಹುತಗಳು ಸಂಭವಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ಪುದುಚೇರಿಯಲ್ಲಿ 24 ಗಂಟೆಗಳಲ್ಲಿ 48.4 ಸೆಂ.ಮೀ ಮಳೆಯಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮೈಲಂನಲ್ಲಿ ಅತಿ ಹೆಚ್ಚು 50 ಸೆಂ.ಮೀ ಮಳೆಯಾಗಿದೆ. ಚಂಡಮಾರುತವು ಇದಯವರೆಗೆ 6 ಜೀವಗಳನ್ನು ಬಲಿ ತೆಗೆದುಕೊಂಡಿದೆ. ವಿದ್ಯುತ್ ಕಡಿತ, ಜಲಾವೃತವಾದ ಬೀದಿಗಳು ಮತ್ತು ಹಾನಿಗೊಳಗಾದ ಮೂಲಸೌಕರ್ಯ ಸೇರಿದಂತೆ ತೀವ್ರ ಅಡೆತಡೆಗಳನ್ನು ಉಂಟುಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕೇರಳದ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ತಮಿಳುನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನೊಂದಿಗೆ ನಿರಂತರ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು