4:35 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು