1:30 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು