4:09 AM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು