11:53 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು