5:27 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಫೆಂಗಲ್ ಹಾವಳಿ: ಕರಾವಳಿ ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಮಂಗಳೂರಿನಲ್ಲಿ ಕೃತಕ ನೆರೆ

03/12/2024, 12:57

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದ ನಿರಂತರ ಗುಡುಗು ಸಹಿತ ಮಳೆಯಾಗುತ್ತಿದ್ದು, ಮಂಗಳೂರಿನ ಹಲವೆಡೆ ಕೃತಕ ನೆರೆ ಉಂಟಾಗಿ ಜಲಾವೃತವಾಗಿದೆ.


ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ನಗರದ ಗೇಟ್ ವೇ ಎಂದೇ ಪರಿಗಣಿಸಲ್ಪಟ್ಟಿರುವ ಪಂಪ್‌ವೆಲ್, ಕೊಟ್ಟಾರ ಚೌಕಿ, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ವಾಹನ ಹಾಗೂ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ನೆಲೆಸಿದ್ದು, ಸಂಜೆ 4 ಗಂಟೆ ಬಳಿಕ ಗುಡುಗು ಸಹಿತ ಭಾರೀ ಮಳೆ ಆರಂಭವಾಗಿತ್ತು. ಸಿಡಿಲಿನ ಅಬ್ಬರಕ್ಕೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸೋಮವಾರ ರಾತ್ರಿಯಿಡೀ ಮಳೆ ಸುರಿದಿದೆ. ಮಂಗಳವಾರ ಮುಂಜಾನೆಯೂ ಭಾರೀ ವರ್ಷಧಾರೆಯಾಗಿದೆ. ಈಗಲೂ ಮೋಡ ಕವಿದ ವಾತಾವರಣ ನೆಲೆಸಿದ್ದು, ಆಗಾಗ ಮಳೆ ಸುರಿಯುತ್ತಿದೆ‌. ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯು ಕಾಲೇಜಿಗೆ ಇಂದು ರಜೆ ಸಾರಲಾಗಿದೆ.
ಕರಾವಳಿ ಮಾತ್ರವಲ್ಲದೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ರಾಜ್ಯದ ರಾಜ್ಯಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು 8 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು, ಮಂಡ್ಯ, ರಾಮನಗರ, ಭಾಗಶಃ ಹಾಸನ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆ ಈಗ ರಾಜ್ಯದ ಎಲ್ಲ ಕಡೆಗೂ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು