7:18 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

03/04/2026, 13:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯಲ್ಲಿ ಇಂದು ಗುರುವಾರ ಹನುಮ ಜಯಂತಿ ಅಂಗವಾಗಿ ಬೃಹತ್ ಆಕರ್ಷಕ ಮೆರವಣಿಗೆ ಜರುಗಿತು. ಸಹಸ್ರಾರು ಸಂಖ್ಯೆಯಲ್ಲಿ ಸೇರಿದ ಹಿಂದುಗಳು, ಕೇಸರಿ ಶಾಲು ತೊಟ್ಟು, ಮಾರ್ಗದ ಉದ್ದಕ್ಕೂ ಕೇಸರಿ ಬಾವುಟಗಳನ್ನು ಹಿಡಿದುಕೊಂಡು, ಶೋಭಾ ಯಾತ್ರೆ ಯಲ್ಲಿ ಪಾಲ್ಗೊಂಡರು.
ಮೆರವಣಿಗೆಯಲ್ಲಿ ಚಂಡೆ ಮದ್ದಳೆ, ಕೊಡಗಿನ ಸಾಂಪ್ರದಾಯ ನೃತ್ಯಗಳು, ಬುಡಕಟ್ಟು ಜನರ ನೃತ್ಯಗಳು, ಹನುಮಾನ ಆಕರ್ಷಕ ಮಂಟಪಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಆಕರ್ಷಣೆಗೆ ಒಳಗಾಗಿತ್ತು.


ಡಿಜೆಸೌಂಡ್ಸ್ ಧ್ವನಿಗೆ ಹಲವರು ಮಾರ್ಗದುದ್ದಕ್ಕೂ
ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಶಿಸ್ತುಬದ್ಧವಾಗಿ ಆಕರ್ಷಕವಾಗಿ ನಡೆದ ಹನುಮ ಜಯಂತಿ ಮೆರವಣಿಗೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಧ್ಯಾಹ್ನ 3 ಗಂಟೆಗೆ ತೆಲುಗರ ಬೀದಿಯಿಂದ ಆರಂಭಗೊಂಡ ಮೆರವಣಿಗೆ ಸಂಜೆ ತಾಲೂಕು ಮೈದಾನದವರೆಗೆ ಸಾಗಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು