1:32 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ

17/05/2025, 18:31

ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗ್ರೇಟರ್ ಬೆಂಗಳೂರು ವಿರೋಧಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಗ್ರೇಟರ್ ಬೆಂಗಳೂರು ಕರ್ನಾಟಕ ಸರ್ಕಾರ ಹೊಸದಾಗಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಅದಕ್ಕೂ ಮುಂಚೆ ಬಿಬಿಎಂಪಿ ಮತ್ತು ನಗರ ಸಭೆ ಇತ್ತು.1964 ಮತ್ತು 1973ರಲ್ಲಿ ನಗರಸಭೆಯಲ್ಲಿ ನಾನು ಸದಸ್ಯನಾಗಿದ್ದೇ. ಗ್ರೇಟರ್ ಬೆಂಗಳೂರು ಬೇಕಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.
ಬೆಂಗಳೂರು ನಗರದ ನಾಗರಿಕರಿಗೆ ಅಪಶುಕುನ, ಕೆಟ್ಟಸಂಸ್ಕೃತಿ ನಾಂದಿಯಾಗಿದೆ. ಚುನಾವಣೆ ಮುಂದೂಡಿಕೆ ಮಾಡುವ ತಂತ್ರವಾಗಿದೆ.
ಗ್ರೇಟರ್ ಬೆಂಗಳೂರುನಿಂದ ಆನಾಹುತವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿಯಾಗಿರುತ್ತಾರೆ. ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷ ಅಧಿಕಾರ ಚುಕ್ಕಾಣೆ ಹಿಡಿದರು ನಮಗೆ ಸಂಬಂಧವಿಲ್ಲ. ಸ್ಥಳೀಯ ಜನಪ್ರತಿನಿಧಿ ಇದ್ದರೆ ಅವರೆ ಸಮಸ್ಯೆಗಳನ್ನು ನೋಡುತ್ತಾರೆ. ಅದರೆ ಇವಾಗ ಸಮಸ್ಯೆ ಕೇಳುವವರಿಲ್ಲ.
ಗುಂಡಿ ಬೆಂಗಳೂರು ಆಗಿದೆ, ಮೊದಲು ಗುಂಡಿ ಮುಚ್ಚುವ ಕೆಲಸವಾಗಬೇಕು. ಕನಕಪುರ, ರಾಮನಗರ ಹಲವಾರು ಪ್ರದೇಶಗಳನ್ನು ಸೇರಿಸುವುದರಿಂದ ಪರಿಹಾರ ಸಾಧ್ಯವಿಲ್ಲ ಎಂದು ಅವರು ನುಡಿದರು.

ಮಹಾಪೌರರು ಒಬ್ಬರೇ ಸಾಕು. ಮೂರು ಮೇಯರ್ ಇದ್ದರೆ ಎತ್ತು ಎರಿಗೆ ಏಳಿಯಿತು, ಕೋಣ ನೀರಿಗೆ ಇಳಿಯಿತು ಎಂಬತಾಗುತ್ತದೆ. ಗ್ರೇಟರ್ ಬೆಂಗಳೂರು ವಿರುದ್ದ ಬೃಹತ್ ಸಾರ್ವಜನಿಕರಿಂದ ಚಳುವಳಿ ಮಾಡಲಾಗುವುದು.
ನಾಡಪ್ರಭು ಕೆಂಪೇಗೌಡರ ಇತಿಹಾಸಕ್ಕೆ ಗ್ರೇಟರ್ ಬೆಂಗಳೂರು ಕೆಟ್ಟ ಸಂಪ್ರದಾಯ ಹಾದಿಕೊಟ್ಟಂತೆ ಆಗುತ್ತದೆ, ಬಿಬಿಎಂಪಿ ಚುನಾವಣೆ ಮಾಡಿ. ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದರೆ ಬೆಂಗಳೂರು ಬಂದ್ ಕರೆ ನೀಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು