5:18 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ

17/05/2025, 18:31

ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗ್ರೇಟರ್ ಬೆಂಗಳೂರು ವಿರೋಧಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಗ್ರೇಟರ್ ಬೆಂಗಳೂರು ಕರ್ನಾಟಕ ಸರ್ಕಾರ ಹೊಸದಾಗಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಅದಕ್ಕೂ ಮುಂಚೆ ಬಿಬಿಎಂಪಿ ಮತ್ತು ನಗರ ಸಭೆ ಇತ್ತು.1964 ಮತ್ತು 1973ರಲ್ಲಿ ನಗರಸಭೆಯಲ್ಲಿ ನಾನು ಸದಸ್ಯನಾಗಿದ್ದೇ. ಗ್ರೇಟರ್ ಬೆಂಗಳೂರು ಬೇಕಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.
ಬೆಂಗಳೂರು ನಗರದ ನಾಗರಿಕರಿಗೆ ಅಪಶುಕುನ, ಕೆಟ್ಟಸಂಸ್ಕೃತಿ ನಾಂದಿಯಾಗಿದೆ. ಚುನಾವಣೆ ಮುಂದೂಡಿಕೆ ಮಾಡುವ ತಂತ್ರವಾಗಿದೆ.
ಗ್ರೇಟರ್ ಬೆಂಗಳೂರುನಿಂದ ಆನಾಹುತವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿಯಾಗಿರುತ್ತಾರೆ. ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷ ಅಧಿಕಾರ ಚುಕ್ಕಾಣೆ ಹಿಡಿದರು ನಮಗೆ ಸಂಬಂಧವಿಲ್ಲ. ಸ್ಥಳೀಯ ಜನಪ್ರತಿನಿಧಿ ಇದ್ದರೆ ಅವರೆ ಸಮಸ್ಯೆಗಳನ್ನು ನೋಡುತ್ತಾರೆ. ಅದರೆ ಇವಾಗ ಸಮಸ್ಯೆ ಕೇಳುವವರಿಲ್ಲ.
ಗುಂಡಿ ಬೆಂಗಳೂರು ಆಗಿದೆ, ಮೊದಲು ಗುಂಡಿ ಮುಚ್ಚುವ ಕೆಲಸವಾಗಬೇಕು. ಕನಕಪುರ, ರಾಮನಗರ ಹಲವಾರು ಪ್ರದೇಶಗಳನ್ನು ಸೇರಿಸುವುದರಿಂದ ಪರಿಹಾರ ಸಾಧ್ಯವಿಲ್ಲ ಎಂದು ಅವರು ನುಡಿದರು.

ಮಹಾಪೌರರು ಒಬ್ಬರೇ ಸಾಕು. ಮೂರು ಮೇಯರ್ ಇದ್ದರೆ ಎತ್ತು ಎರಿಗೆ ಏಳಿಯಿತು, ಕೋಣ ನೀರಿಗೆ ಇಳಿಯಿತು ಎಂಬತಾಗುತ್ತದೆ. ಗ್ರೇಟರ್ ಬೆಂಗಳೂರು ವಿರುದ್ದ ಬೃಹತ್ ಸಾರ್ವಜನಿಕರಿಂದ ಚಳುವಳಿ ಮಾಡಲಾಗುವುದು.
ನಾಡಪ್ರಭು ಕೆಂಪೇಗೌಡರ ಇತಿಹಾಸಕ್ಕೆ ಗ್ರೇಟರ್ ಬೆಂಗಳೂರು ಕೆಟ್ಟ ಸಂಪ್ರದಾಯ ಹಾದಿಕೊಟ್ಟಂತೆ ಆಗುತ್ತದೆ, ಬಿಬಿಎಂಪಿ ಚುನಾವಣೆ ಮಾಡಿ. ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದರೆ ಬೆಂಗಳೂರು ಬಂದ್ ಕರೆ ನೀಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು