3:28 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಗ್ರೇಟರ್ ಬೆಂಗಳೂರು ವಿರುದ್ದ ಹೋರಾಟ, ಬೆಂಗಳೂರು ಬಂದ್ ಮಾಡಲಾಗುವುದು: ವಾಟಾಳ್ ನಾಗರಾಜ್ ಎಚ್ಚರಿಕೆ

17/05/2025, 18:31

ಬೆಂಗಳೂರು(reporterkarnataka.com): ಸರಕಾರ ಮಾಡಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ವಿರುದ್ಧ ಹೋರಾಟ ನಡೆಸಲಾಗುವುದು. ಅಗತ್ಯ ಬಿದ್ದರೆ ಬೆಂಗಳೂರು ಬಂದ್ ಮಾಡಲಾಗುವುದು. ಜೈಲಿಗೂ ಹೋಗಲು ಸಿದ್ದ ಎಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗ್ರೇಟರ್ ಬೆಂಗಳೂರು ವಿರೋಧಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಗ್ರೇಟರ್ ಬೆಂಗಳೂರು ಕರ್ನಾಟಕ ಸರ್ಕಾರ ಹೊಸದಾಗಿ ನಿರ್ಮಾಣ ಮಾಡಲು ಹೊರಟಿದ್ದಾರೆ. ಅದಕ್ಕೂ ಮುಂಚೆ ಬಿಬಿಎಂಪಿ ಮತ್ತು ನಗರ ಸಭೆ ಇತ್ತು.1964 ಮತ್ತು 1973ರಲ್ಲಿ ನಗರಸಭೆಯಲ್ಲಿ ನಾನು ಸದಸ್ಯನಾಗಿದ್ದೇ. ಗ್ರೇಟರ್ ಬೆಂಗಳೂರು ಬೇಕಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.
ಬೆಂಗಳೂರು ನಗರದ ನಾಗರಿಕರಿಗೆ ಅಪಶುಕುನ, ಕೆಟ್ಟಸಂಸ್ಕೃತಿ ನಾಂದಿಯಾಗಿದೆ. ಚುನಾವಣೆ ಮುಂದೂಡಿಕೆ ಮಾಡುವ ತಂತ್ರವಾಗಿದೆ.
ಗ್ರೇಟರ್ ಬೆಂಗಳೂರುನಿಂದ ಆನಾಹುತವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿಯಾಗಿರುತ್ತಾರೆ. ಬಿಜೆಪಿ, ಕಾಂಗ್ರೆಸ್ ಯಾವ ಪಕ್ಷ ಅಧಿಕಾರ ಚುಕ್ಕಾಣೆ ಹಿಡಿದರು ನಮಗೆ ಸಂಬಂಧವಿಲ್ಲ. ಸ್ಥಳೀಯ ಜನಪ್ರತಿನಿಧಿ ಇದ್ದರೆ ಅವರೆ ಸಮಸ್ಯೆಗಳನ್ನು ನೋಡುತ್ತಾರೆ. ಅದರೆ ಇವಾಗ ಸಮಸ್ಯೆ ಕೇಳುವವರಿಲ್ಲ.
ಗುಂಡಿ ಬೆಂಗಳೂರು ಆಗಿದೆ, ಮೊದಲು ಗುಂಡಿ ಮುಚ್ಚುವ ಕೆಲಸವಾಗಬೇಕು. ಕನಕಪುರ, ರಾಮನಗರ ಹಲವಾರು ಪ್ರದೇಶಗಳನ್ನು ಸೇರಿಸುವುದರಿಂದ ಪರಿಹಾರ ಸಾಧ್ಯವಿಲ್ಲ ಎಂದು ಅವರು ನುಡಿದರು.

ಮಹಾಪೌರರು ಒಬ್ಬರೇ ಸಾಕು. ಮೂರು ಮೇಯರ್ ಇದ್ದರೆ ಎತ್ತು ಎರಿಗೆ ಏಳಿಯಿತು, ಕೋಣ ನೀರಿಗೆ ಇಳಿಯಿತು ಎಂಬತಾಗುತ್ತದೆ. ಗ್ರೇಟರ್ ಬೆಂಗಳೂರು ವಿರುದ್ದ ಬೃಹತ್ ಸಾರ್ವಜನಿಕರಿಂದ ಚಳುವಳಿ ಮಾಡಲಾಗುವುದು.
ನಾಡಪ್ರಭು ಕೆಂಪೇಗೌಡರ ಇತಿಹಾಸಕ್ಕೆ ಗ್ರೇಟರ್ ಬೆಂಗಳೂರು ಕೆಟ್ಟ ಸಂಪ್ರದಾಯ ಹಾದಿಕೊಟ್ಟಂತೆ ಆಗುತ್ತದೆ, ಬಿಬಿಎಂಪಿ ಚುನಾವಣೆ ಮಾಡಿ. ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದರೆ ಬೆಂಗಳೂರು ಬಂದ್ ಕರೆ ನೀಡಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು