2:07 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು