7:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು