12:29 PM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು