5:26 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು