4:56 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು