5:45 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು