8:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು