5:45 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ ಪ್ರದರ್ಶನ: ನಿರ್ದೇಶಕ ಡಾ ಕೆ. ರಮೇಶ್ ಕಾಮತ್ ಗೆ ಸನ್ಮಾನ

28/08/2024, 16:08

ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಅಪ್ಸರಧಾರ ಚಲನಚಿತ್ರ ಪ್ರದರ್ಶನ ಬುಧವಾರ ಭಾರತ್ ಸಿನೆಮಾಸ್ ನಲ್ಲಿ ನಡೆಯಿತು.
ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ ಚಿತ್ರ ಇದಾಗಿದೆ. ಈ ಸಂದರ್ಭದಲ್ಲಿ ಡಾ ಕಾಮತ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಎರಿಕ್ ಒಝೇರಿಯೊ, ಲುವಿ ಪಿಂಟೊ, ನವೀನ್ ಲೋಬೊ, ರೊನಿ ಅರುಣ್ ಹಾಗೂ ವಿಕಾಸ್ ಲಸ್ರಾದೊ ಉಪಸ್ಥಿತರಿದ್ದರು. ಈ ಚಿತ್ರೋತ್ಸವದಲ್ಲಿ ಭಾಗವಹಿಸಲು ಆಯ್ಕೆಯಾದ ಕುಲಶೇಖರದ ಸಂತ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಚಲನಚಿತ್ರವನ್ನು ವೀಕ್ಷಿಸಿ ಸಂತಸಪಟ್ಟರು.
ಕೊಂಕಣಿ ಮಾನ್ಯತಾ ದಿನಾಚರಣೆಯ ಅಂಗವಾಗಿ ಈ ಚಿತ್ರೋತ್ಸವವು ಆಗಸ್ಟ್ 23 ರಿಂದ ಸೆಪ್ಟೆಂಬರ್ 14 ರವರೆಗೆ ನಡೆಯುತ್ತಿದ್ದು, ಕರ್ನಾಟಕ ಹಾಗೂ ಗೋವಾದ ಸುಮಾರು 25 ಚಲನಚಿತ್ರಗಳು, 5 ಕಿರುಚಿತ್ರಗಳು ಹಾಗೂ 2 ಮಕ್ಕಳ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು