ಇತ್ತೀಚಿನ ಸುದ್ದಿ
Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ
25/03/2025, 11:36

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com
ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ
ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ.
ಸ್ಥಳೀಯರು ನೀರುಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು. ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ಮನೆಗಳು ಹಾಗೂ ಏರ್ಟೆಲ್ ನವರ ಟವರ್ ಇದ್ದು ಸುತ್ತಲೂ ಬೆಂಕಿ ಆವರಿಸಿದ್ದು ಹಾನಿಯಾಗಲಿಲ್ಲ. ಮಠದ ಆಡಳಿತ ಕ್ರಿಯಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಸ್ಥಳಕ್ಕಾಗಮಿಸಿ ಸಹಕರಿಸಿದರು.