3:42 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ

25/03/2025, 11:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ
ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ.


ಸ್ಥಳೀಯರು ನೀರುಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು. ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ಮನೆಗಳು ಹಾಗೂ ಏರ್ಟೆಲ್ ನವರ ಟವರ್ ಇದ್ದು ಸುತ್ತಲೂ ಬೆಂಕಿ ಆವರಿಸಿದ್ದು ಹಾನಿಯಾಗಲಿಲ್ಲ. ಮಠದ ಆಡಳಿತ ಕ್ರಿಯಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಸ್ಥಳಕ್ಕಾಗಮಿಸಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು