1:00 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ

25/03/2025, 11:36

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ
ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ.


ಸ್ಥಳೀಯರು ನೀರುಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು. ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ಮನೆಗಳು ಹಾಗೂ ಏರ್ಟೆಲ್ ನವರ ಟವರ್ ಇದ್ದು ಸುತ್ತಲೂ ಬೆಂಕಿ ಆವರಿಸಿದ್ದು ಹಾನಿಯಾಗಲಿಲ್ಲ. ಮಠದ ಆಡಳಿತ ಕ್ರಿಯಾಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಸ್ಥಳಕ್ಕಾಗಮಿಸಿ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು