5:10 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಫಿರೋಜ್ ಪುರ: ಪ್ರಧಾನಿ ಕಾರನ್ನು ತಡೆದ ಪ್ರತಿಭಟನಾಕಾರರು; 20 ನಿಮಿಷ ಫ್ಲೈಓವರ್ ನಲ್ಲೇ ಕಾದ ಮೋದಿ; ರ‌್ಯಾಲಿ ರದ್ದು

05/01/2022, 19:33

ಚಂಡೀಗಢ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಪ್ರತಿಭಟನಾಕಾರರು ತಡೆದ ಘಟನೆ ಪಂಜಾಬ್ ನ ಫಿರೋಜ್ ಪುರ ಬಳಿ ಸೋಮವಾರ ನಡೆದಿದ್ದು, ಪ್ರಧಾನಿಯವರು ಸುಮಾರು 15ರಿಂದ 20 ರಸ್ತೆಯಲ್ಲಿ ಕಾಯುವಂತಾಯಿತು.

ಪಂಜಾಬ್​ನ ಫಿರೋಜ್​ಪುರದಲ್ಲಿ ಆಯೋಜಿಸಲಾದ ರ‌್ಯಾಲಿಗೆ ಪ್ರಧಾನಿ ಮೋದಿ ತೆರಳುತ್ತಿದ್ದರು. ಭಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಫಿರೋಜ್​ಪುರಕ್ಕೆ ಹೊರಟಿದ್ದರು. ಆದರೆ ಆ ರಸ್ತೆಯನ್ನು ಕೆಲವು ಪ್ರತಿಭಟನಾಕಾರರು ಕಾರನ್ನು ತಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿದ್ದ ವಾಹನ ಮತ್ತು ಬೆಂಗಾವಲು ವಾಹನಗಳೆಲ್ಲ ಫ್ಲೈಓವರ್ ಮೇಲೆ 15-20 ನಿಮಿಷ ನಿಲ್ಲುವಂತಾಗಿತ್ತು. ಬಳಿಕ ಫಿರೋಜ್​ಪುರ ರ‌್ಯಾಲಿಯನ್ನು ರದ್ದುಗೊಳಿಸಲಾಯಿತು. ಪ್ರಧಾನಿ ಮತ್ತೆ ಭಟಿಂಡಾ ವಿಮಾನ ನಿಲ್ದಾಣಕ್ಕೆ ವಾಪಸಾದರು.

ಪ್ರಧಾನಿ ನರೇಂದ್ರ ಮೋದಿಯವರ ರ‌್ಯಾಲಿ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಭದ್ರತಾ ಲೋಪದಿಂದ ರದ್ದುಪಡಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ. 


ದೆಹಲಿಗೆ ವಾಪಸ್​ ಆಗಲು ಭಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದ ಪ್ರಧಾನಿ ಮೋದಿ ಅವರು ಅಲ್ಲಿ ಭದ್ರತೆ ಒದಗಿಸುವ ಸಲುವಾಗಿ ಇದ್ದ ಪಂಜಾಬ್​ ರಾಜ್ಯ ರಕ್ಷಣಾ ಅಧಿಕಾರಿಗಳಿಗೆ,  ‘ನಿಮ್ಮ(ಪಂಜಾಬ್) ಮುಖ್ಯಮಂತ್ರಿಗೆ ನನ್ನ ಧನ್ಯವಾದ ತಿಳಿಸಿ, ಕೊನೆಪಕ್ಷ ನಾನು ಭಟಿಂಡಾ ವಿಮಾನ ನಿಲ್ದಾಣದವರೆಗೆ ಜೀವಂತವಾಗಿಯಾದರೂ ಬರುವಂತೆ ಮಾಡಿದುದಕ್ಕೆ ಎಂದು ಹೇಳಿರುವುದಾಗಿ ಎಎನ್​ಐ ಟ್ವೀಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು