7:07 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಫಿರೋಜ್ ಪುರ: ಪ್ರಧಾನಿ ಕಾರನ್ನು ತಡೆದ ಪ್ರತಿಭಟನಾಕಾರರು; 20 ನಿಮಿಷ ಫ್ಲೈಓವರ್ ನಲ್ಲೇ ಕಾದ ಮೋದಿ; ರ‌್ಯಾಲಿ ರದ್ದು

05/01/2022, 19:33

ಚಂಡೀಗಢ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಪ್ರತಿಭಟನಾಕಾರರು ತಡೆದ ಘಟನೆ ಪಂಜಾಬ್ ನ ಫಿರೋಜ್ ಪುರ ಬಳಿ ಸೋಮವಾರ ನಡೆದಿದ್ದು, ಪ್ರಧಾನಿಯವರು ಸುಮಾರು 15ರಿಂದ 20 ರಸ್ತೆಯಲ್ಲಿ ಕಾಯುವಂತಾಯಿತು.

ಪಂಜಾಬ್​ನ ಫಿರೋಜ್​ಪುರದಲ್ಲಿ ಆಯೋಜಿಸಲಾದ ರ‌್ಯಾಲಿಗೆ ಪ್ರಧಾನಿ ಮೋದಿ ತೆರಳುತ್ತಿದ್ದರು. ಭಟಿಂಡಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಫಿರೋಜ್​ಪುರಕ್ಕೆ ಹೊರಟಿದ್ದರು. ಆದರೆ ಆ ರಸ್ತೆಯನ್ನು ಕೆಲವು ಪ್ರತಿಭಟನಾಕಾರರು ಕಾರನ್ನು ತಡೆದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿದ್ದ ವಾಹನ ಮತ್ತು ಬೆಂಗಾವಲು ವಾಹನಗಳೆಲ್ಲ ಫ್ಲೈಓವರ್ ಮೇಲೆ 15-20 ನಿಮಿಷ ನಿಲ್ಲುವಂತಾಗಿತ್ತು. ಬಳಿಕ ಫಿರೋಜ್​ಪುರ ರ‌್ಯಾಲಿಯನ್ನು ರದ್ದುಗೊಳಿಸಲಾಯಿತು. ಪ್ರಧಾನಿ ಮತ್ತೆ ಭಟಿಂಡಾ ವಿಮಾನ ನಿಲ್ದಾಣಕ್ಕೆ ವಾಪಸಾದರು.

ಪ್ರಧಾನಿ ನರೇಂದ್ರ ಮೋದಿಯವರ ರ‌್ಯಾಲಿ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಭದ್ರತಾ ಲೋಪದಿಂದ ರದ್ದುಪಡಿಸಲಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ. 


ದೆಹಲಿಗೆ ವಾಪಸ್​ ಆಗಲು ಭಟಿಂಡಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದ ಪ್ರಧಾನಿ ಮೋದಿ ಅವರು ಅಲ್ಲಿ ಭದ್ರತೆ ಒದಗಿಸುವ ಸಲುವಾಗಿ ಇದ್ದ ಪಂಜಾಬ್​ ರಾಜ್ಯ ರಕ್ಷಣಾ ಅಧಿಕಾರಿಗಳಿಗೆ,  ‘ನಿಮ್ಮ(ಪಂಜಾಬ್) ಮುಖ್ಯಮಂತ್ರಿಗೆ ನನ್ನ ಧನ್ಯವಾದ ತಿಳಿಸಿ, ಕೊನೆಪಕ್ಷ ನಾನು ಭಟಿಂಡಾ ವಿಮಾನ ನಿಲ್ದಾಣದವರೆಗೆ ಜೀವಂತವಾಗಿಯಾದರೂ ಬರುವಂತೆ ಮಾಡಿದುದಕ್ಕೆ ಎಂದು ಹೇಳಿರುವುದಾಗಿ ಎಎನ್​ಐ ಟ್ವೀಟ್ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು