ಇತ್ತೀಚಿನ ಸುದ್ದಿ
ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ
04/06/2026, 09:07
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarmataka@gmail.com
ಮುಂಗಾರು ಆರಂಭದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 1ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿ ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮೀನುಗಾರಿಕೆ ಉಪ ನಿರ್ದೇಶಕರಾದ ಸಿ.ಎಸ್.ಸಚಿನ್ ತಿಳಿಸಿದ್ದಾರೆ.












