3:19 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಫೋಕ್ಸೋ ಪ್ರಕರಣ: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್

08/06/2026, 20:24

ಬೆಂಗಳೂರು(reporterkarnataka.com): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ  ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್ ನೀಡಿದೆ.
ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಈ ಸಡಿಲಿಕೆ ಸಿಕ್ಕಿರುವುದರಿಂದ ಯಡಿಯೂರಪ್ಪ ಅವರು ಯಾವುದೇ ಕಾನೂನಾತ್ಮಕ ಅಡೆತಡೆ ಅಥವಾ ಮುಂಚಿತ ಅನುಮತಿಯ ಕಿರಿಕಿರಿ ಇಲ್ಲದೇ ಮುಕ್ತವಾಗಿ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ.

*ಮುಖ್ಯಾಂಶಗಳು:*
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೊ ಕೇಸ್
ಜಾಮೀನು ಷರತ್ತು ಸಡಿಲಿಕೆ ಕೋರಿ ಬಿಎಸ್ ಯಡಿಯೂರಪ್ಪ ಮನವಿಯನ್ನು ಪುರಸ್ಕರಿಸಿದ ಕೋರ್ಟ್​
ಜಾಮೀನು ಸಂದರ್ಭದಲ್ಲಿ ಕೋರ್ಟ್ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತು ವಿಧಿಸಲಾಗಿತ್ತು.
ಇದೀಗ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ ಷರತ್ತು ಸಡಿಲಿಸಿದ ಹೈಕೋರ್ಟ್
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಯಡಿಯೂರಪ್ಪನವರಿಗೆ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಲಾಗಿದ್ದ ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ.

*ಪ್ರಕರಣದ ಹಿನ್ನೆಲೆ:*
2024ರ ಫೆಬ್ರವರಿ 2ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ನ್ಯಾಯ ಒದಗಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರು ದಾಖಲಾದ ನಂತರ ಈ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸಲಾಗಿದ್ದು, ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದ್ದು, ಈಗಾಗಲೇ ಕೋರ್ಟ್ ಸಹ ಜಾಮೀನು ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು