12:38 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ‌, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ವಾಮನ ನಂದಾವರ ಇನ್ನಿಲ್ಲ

15/03/2025, 18:02

ಬಂಟ್ವಾಳ(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಹೆಸರಾಂತ ಜಾನಪದ ವಿದ್ವಾಂಸರು, ಹಲವಾರು ಪುಸ್ತಕಗಳನ್ನು ಬರೆದ ಹೆಸರಾಂತ ಲೇಖರಾಗಿ ಜನಪ್ರೀತಿಗಳಿಸಿದ, ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ತುಳು ಕನ್ನಡ ವಿದ್ವಾಂಸರಾದ ಡಾ ವಾಮನ ನಂದಾವರ ಅವರು ಶನಿವಾರ ನಿಧನರಾದರು.
81 ವರ್ಷ ವಯಸ್ಸಿನ ವಾಮನ ನಂದಾವರ ಅವರು ಪತ್ನಿ ಚಂದ್ರಕಲಾ ನಂದಾವರ ಹಾಗೂ ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್ ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕ ಅವಕಾಶ ಮಾಡಿಕೊಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುದುಂಗಾರು ಕಟ್ಟೆ, ಪಾಣೆಮಂಗಳೂರು ಎಸ್ .ವಿ.ಎಸ್.ಶಾಲೆ, ಕುರ್ನಾಡು ಹಾಗೂ ಕೋಟೆಕಾರು ಆನಂದಾಶ್ರಮ ಶಾಲೆಗಳಲ್ಲಿ ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಂತ‌ ಎಲೋಶಿಯಸ್ ಕಾಲೇಜಿನಲ್ಲಿ ಬಿಎಸ್ ಸಿ ಪದವಿ ಪಡೆದಿದ್ದರು. ಮಂಗಳೂರು ಸರಕಾರಿ ಬಿಎಡ್ ಕಾಲೇಜಿನಲ್ಲಿ ಬಿಎಡ್ ಶಿಕ್ಷಣ ಪಡೆದು ಸೈಂಟ್ ಆ್ಯನ್ಸ್ ಮಹಿಳಾ ಶಿಕ್ಷಕ- ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ,ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರಾಗಿದ್ದರು. ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ದರ್ಶನ ಯೋಜನೆಯ ಸಹಾಯಕ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ಬಂಟ್ವಾಳದ ನಂದಾವರದಲ್ಲಿ ನಡೆದ ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ನ 12 ಸಾಹಿತ್ಯ ಸಮ್ಮೇಳಾಧ್ಯಕ್ಷರಾಗಿ ಗೌರವಕ್ಕೆ ಪಾತ್ರರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು