8:36 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Food & Civil Supply | ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆಗೆ ಸರಕಾರ ಆದೇಶ

13/03/2025, 21:41

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ತಿಂಗಳಿನಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ.
ಅದರಂತೆ ಫೆಬ್ರವರಿ-2025 ತಿಂಗಳಿನಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ತಿಂಗಳಿನಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು.
ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಿ ಕ್ರಮಕೈಗೊಳ್ಳಲಾಗುವುದು. ಅನಧಿಕೃತವಾಗಿ ಕಾಳಸಂತೆಯಲ್ಲಿ ಆಹಾರಧಾನ್ಯವನ್ನು ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಕೈಗೊಳ್ಳಲಾಗುವುದು.
ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು