2:35 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು