9:07 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ…

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು