4:28 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು