7:48 AM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು