10:02 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು