7:18 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

Food & Civil supply | ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ತೀರ್ಮಾನ: ಆಹಾರ ಸಚಿವ ಕೆ.ಎಚ್. ಮುನಿಯಪ್ಪ

22/04/2025, 20:36

ಬೆಂಗಳೂರು(reporterkarnataka.com): ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.


ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ದರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421ದರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀದಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವ ರೆಡ್ಡಿ ಕರೂರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು